Visiting the Ashraya Colony of Kedamullur Grama Panchayat area of Virajpet assembly constituency and observing the development of infrastructure there and after accepting the request of various demands, inauguration of new concrete road in Kottoli Guddali, 07/08/2025

ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶ್ರಯ ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯದ ಅಭಿವೃದ್ಧಿಯ ವೀಕ್ಷಣೆ ಮಾಡಿ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದ ಬಳಿಕ ಕೊಟ್ಟೋಳಿ ನೂತನ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಹಾಗೂ ಕೊಟ್ಟೋಳಿ ಆಶ್ರಯ ಕಾಲೋನಿಯ ನೂತನ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ನೆರೆವೇರಿಸಲಾಯಿತು.
 
 
 
 
 
 
 
 
 
 
 

The new library of SEA Women's College in Perambadi, Virajpet taluk was inaugurated today., 07/08/2025

ವಿರಾಜಪೇಟೆ ತಾಲೂಕು ಪೆರಂಬಾಡಿಯಲ್ಲಿರುವ ಎಸ್ ಇ ಎ ಮಹಿಳಾ ಕಾಲೇಜಿನ ನೂತನ ಗ್ರಂಥಾಲಯವನ್ನು ಇಂದು ಲೋಕಾರ್ಪಣೆ ಮಾಡಲಾಯಿತು..
 
 
 
 
 
 
 
 

While participating in the meeting of workers in Balale zone of Ponnampete taluk., 07/08/2025

ಪೊನ್ನಂಪೇಟೆ ತಾಲೂಕಿನ ಬಾಳಲೆ ವಲಯ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಂದರ್ಭ..
 
 
 
 
 
 

Visited Lakkunda Paisari, Ponnampet taluk Kanur village panchayat, Virajpet assembly constituency and observed the development of basic facilities there and requested various demands., 07/08/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಕಾನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಲಕ್ಕುಂದ ಪೈಸಾರಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯದ ಅಭಿವೃದ್ಧಿಯ ವೀಕ್ಷಣೆ ಮಾಡಿ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಲಾಯಿತು/div>
 
 
 
 
 
 
 
 
 
 
 

My wife Mrs. Kanchan participated as the chief guest in the Kakkada Namme program held at Madikeri Kodava Samaja Pommakkada Koota and Madikeri Kodava Samaja. Kodava Samaja Pommakkada Kuttam symbol broch (decorative jewellery used to strip saree) jewellery, 04/08/2025

ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟ ಹಾಗೂ ಮಡಿಕೇರಿ ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ನಡೆದ, ಕಕ್ಕಡ ನಮ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ರವರು ಭಾಗವಹಿಸಿದರು. ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಚಿಹ್ನೆ ಇರುವ ಬ್ರೋಚ್ (ಸೀರೆ ಸಿಕ್ಕಿಸಲು ಬಳಸುವ ಅಲಂಕಾರಿಕ ಆಭರಣ) ಆಭರಣವನ್ನು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ನನ್ನ ಶ್ರೀಮತಿ ರವರು , ನಮ್ಮ ಪೂರ್ವಿಕರು ನಮಗೆ ಬದುಕಿನ ಶಿಸ್ತಿನ ಜೊತೆಗೆ ಆಹಾರ ಪದ್ದತಿಯಲ್ಲಿಯೂ ಕೂಡ ಶಿಸ್ತನ್ನು ಬಳುವಳಿಯಾಗಿ ನೀಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗಿನ ಪರಿಸರ ಹಾಗೂ ಹವಾಗುಣಕ್ಕನ್ನುಸಾರವಾಗಿ, ಕಾಲಕಾಲಕ್ಕೆ ವಿವಿಧ ಬಗೆಯ ಆಹಾರ ಬಳಕೆ ಮಾಡುವ ವಿಶಿಷ್ಟ ಸಂಪ್ರದಾಯವನ್ನು ನಮ್ಮ ಪೂರ್ವಜರು ನೂರಾರು ವರ್ಷಗಳ ಹಿಂದೆಯೇ ತಿಳಿದುಕೊಂಡಿದ್ದರು ಎಂದರೆ, ಅವರ ಜಾಣ್ಮೆ ಹಾಗೂ ವೈಜ್ಞಾನಿಕ ಚಿಂತನೆಯನ್ನು ನಾವು ಮೆಚ್ಚಲೇ ಬೇಕು. ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ವೈವಿಧ್ಯಮಯ ಆಹಾರ ಬಳಕೆ ಮಾಡುತ್ತಿದ್ದು, ಇವುಗಳನ್ನು ಕಕ್ಕಡ ನಮ್ಮೆಯಲ್ಲಿ ಪ್ರದರ್ಶನಮಾಡಿ ನಮ್ಮ ಪರಂಪರೆಯನ್ನು ಮುಂದಿನ ಪೀಳಗೆಗೆ ಶಾಶ್ವತವಾಗಿ ಉಳಿಸಲು ಪೊಮ್ಮಕ್ಕಡ ಕೂಟದ ಪ್ರಯತ್ನ ಶ್ಲಾಘನೀಯ ಹಾಗೂ ಅತ್ಯಂತ ಸಮಯೋಚಿತ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು