Over 40 BJP Leaders and Activists Join Congress in Ponnampet, 16/09/2026

ಪೊನ್ನಂಪೇಟೆ ತಾಲೂಕಿನ 40ಕ್ಕೂ ಹೆಚ್ಚು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಇಂದು ನನ್ನ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಎಲ್ಲರಿಗೂ ಪಕ್ಷದ ಬಾವುಟವನ್ನು ನೀಡಿ ಶಲ್ಯಾವಧಿಸುವ ಮೂಲಕ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್ ರವರ ಜೊತೆಗೂಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
 

After Recovery, Sri Abhir Visits Home Office to Offer Thanks, 16/09/2026

ಕೆಲ ತಿಂಗಳ ಹಿಂದೆ ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮದ ಶ್ರೀ ಅಭಿರವರು ಆನೆದಾಳಿಗೆ ತುತ್ತಾಗಿದ್ದು, ಅವರ ಶೀಘ್ರ ಚೇತರಿಕೆಗಾಗಿ ಮೈಸೂರಿನ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ಈಗ ಸಂಪೂರ್ಣ ಚೇತರಿಸಿಕೊಂಡ ಅವರು ನನ್ನ ಗೃಹ ಕಚೇರಿಗೆ ಆಗಮಿಸಿ ಧನ್ಯವಾದ ಅರ್ಪಿಸಿದ ಸಂದರ್ಭ.

 


Participated in Grand Ganeshotsava Celebrations in Gonikoppa and Titimati, 15/09/2026

ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ, ತಿತಿಮತಿ ಭಾಗಗಳಲ್ಲಿ ಅದ್ದೂರಿಯಿಂದ ಹಾಗೂ ಅತ್ಯಂತ ಭಕ್ತಿ ಭಾವದಿಂದ ಆಚರಿಸುತ್ತಿರುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನಿಗೆ ಪ್ರಾರ್ಥನೆ ಸಲ್ಲಿಸಿ ನಾಡಿನ ಶಾಂತಿ ಸುಭಿಕ್ಷೆಗಾಗಿ ಬೇಡಿಕೊಳ್ಳಲಾಯಿತು.


Participated in the book release function organized by Jabboomi Charitable Trust (R) at Kodava Samaj Ponnampete, on the occasion of release of the book composed by Aithichanda Ramesh Uttappa., 15/09/2026

ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ (ರಿ) ರವರು ಕೊಡವ ಸಮಾಜ ಪೊನ್ನಂಪೇಟೆಯಲ್ಲಿ ಆಯೋಜಿಸಿದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ, ಐತಿಚಂಡ ರಮೇಶ್ ಉತ್ತಪ್ಪರವರು ರಚಿಸಿದ ಪುಸ್ತಕವನ್ನು ಬಿಡುಗಡೆಗೊಳಿಸಿದ ಸಂದರ್ಭ.

 


Bhoomi Pooja Held for New Hockey Turf in Ponnampete, 15/09/2026

ಪೊನ್ನಂಪೇಟೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಹಾಕಿ ಟರ್ಫ್ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನನ್ನೊಂದಿಗೆ ಅಜ್ಜಿಕುಟ್ಟಿರ ಹಾಕಿ ನಮ್ಮೆಯ ಅಧ್ಯಕ್ಷರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಎಸ್ ಕಾರ್ಯಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಧ್ಯಕ್ಷರಾದ ಚಪ್ಪಡಿರ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಬ್ಲಾಕ್ ಮಹಿಳಾ ಅಧ್ಯಕ್ಷರಾದ ಆಶಾ ಪೂಣಚ್ಚ, ಹಿರಿಯರಾದ ಮುಕಳೇರ ಕುಶಾಲಪ್ಪ, ವಾಸು ಕುಟ್ಟಪ್ಪ, ಒಲಂಪಿಯನ್ ಬಾಳೇಯಾಡ ಸುಬ್ರಮಣಿ , ಚೆಪ್ಪುಡೀರ ಪೂಣಚ್ಚ, ಅಜ್ಜಿಕುಟ್ಟಿರ ಕುಟುಂಬದ ಸರ್ವ ಸದಸ್ಯರು, ಅಧಿಕಾರಿ ವರ್ಗದವರು, ಪಕ್ಷದ ಮುಖಂಡರು ,ಕಾರ್ಯಕರ್ತರು ಉಪಸ್ಥಿತರಿದ್ದು ಈ ಶುಭ ಸಮಾರಂಭಕ್ಕೆ ಸಾಕ್ಷಿಯಾದರು.