A student scholarship program, 29/08/2021

ಆಗಸ್ಟ್ 27, ಶುಕ್ರವಾರದಂದು ಎ.ಕೆ.ಸುಬ್ಬಯ್ಯ-ಪೊನ್ನಮ್ಮ ಶೈಕ್ಷಣಿಕ ಹಾಗೂ ದತ್ತಿ ಟ್ರಸ್ಟ್'ನ ವತಿಯಿಂದ, ವಿದ್ಯಾರ್ಥಿಯನಿಯರಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು "ಶಕ್ತಿ" ದಿನಪತ್ರಿಕೆಯ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ವಿದ್ಯಾರ್ಥಿ ವೇತನಕ್ಕೆ ಒಟ್ಟು 100 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಅವುಗಳಲ್ಲಿ 45 ಅರ್ಹ ಫಲಾನುಭವಿ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಲ್ಲಿ ಪ್ರತಿಯೊಬ್ಬರಿಗೂ ವರ್ಷಕ್ಕೆ ರೂ.10,000 ನಂತೆ ವಿದ್ಯಾರ್ಥಿ ವೇತನ ನೀಡಲಾಯಿತು. ಪಿ.ಯು.ಸಿ ಮುಗಿಸಿ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್'ಶಿಪ್ ನೀಡಲಾಗುತ್ತಿದೆ. ಮುಂದಿನ ಎರಡು ವರ್ಷಗಳು ಕೂಡ ಈ ವಿದ್ಯಾರ್ಥಿಗಳಿಗೆ ವರ್ಷಕ್ಕೆ ತಲಾ ರೂ.10,000 ವಿದ್ಯಾರ್ಥಿ ವೇತನ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮುಖ್ಯ ಅತಿಥಿಗಳಿಗೆ, ಹಿರಿಯರಿಗೆ, ಕುಟುಂಬದವರಿಗೆ, ಸ್ನೇಹಿತರಿಗೆ, ನಮ್ಮ ಮೇಲೆ ಅಪಾರ ಪ್ರೀತಿ ವಿಶ್ವಾಸ ತೋರಿಸಿದ ಎಲ್ಲರಿಗೂ ನನ್ನ ವಂದನೆಗಳು ಮತ್ತು ಧನ್ಯವಾದಗಳು. ನಿಮ್ಮೆಲ್ಲರ ಆಶೀರ್ವಾದ, ಪ್ರೀತಿ-ವಿಶ್ವಾಸ ನಮ್ಮ ಮೇಲಿರಲಿ ಎಂದು ಆಶಿಸುತ್ತೇನೆ. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ನೆರವಾದ ಎಲ್ಲ ಸ್ನೇಹಿತರಿಗೂ ನಾನು ಆಭಾರಿಯಾಗಿದ್ದೇನೆ. ಎಲ್ಲ ಮಾಧ್ಯಮ ಮಿತ್ರರಿಗೂ ನನ್ನ ಧನ್ಯವಾದಗಳು.
 
 
img
img
img
img
img
img
img
img
img
img
img
img
 

Scholarship for girl students of Kodagu, 01/08/2021

 
img
 

Appointment letter was distributed to the newly elected Kodagu District Level Law, Human Rights and Information Unit officials, 17/07/2021

ಶುಕ್ರವಾರ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಗೊಂಡ ಕೊಡಗಿನ ಜಿಲ್ಲಾಮಟ್ಟದ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಘಟಕದ ಪದಾಧಿಕಾರಿಗಳಿಗೆ ನೇಮಕ ಪತ್ರವನ್ನು ವಿತರಿಸಲಾಯಿತು. ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಇದೇ ಮಾದರಿ ಜಿಲ್ಲಾಮಟ್ಟದ ಕಾನೂನು ಘಟಕಗಳನ್ನು, ಮಾನವ ಹಕ್ಕುಗಳ ಘಟಕಗಳನ್ನು ಸದೃಢಗೊಳಿಸಲು ಕಾರ್ಯತಂತ್ರ ರೂಪಿಸಲಾಗುವುದು.
 
 
img
 

The fight will go on until justice is served, 14/06/2021

ರಾಯ್ ಡೇವಿಸ್ ಎಂಬ ಅಮಾಯಕನನ್ನು ಕೊಲೆ ಮಾಡಲಾಗಿದೆ. ಇದು ಪೊಲೀಸರು ನಡೆಸಿರುವ ಹತ್ಯೆ. ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಪೊಲೀಸರಿಂದ ಅತ್ಯಾಚಾರ ಹೆಚ್ಚಾಗಿದೆ. ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಮತ್ತು ಶಾಸಕರ ಗಮನಕ್ಕೆ ತಂದಿದ್ದೇನೆ. ಜನಜೀವನವನ್ನು ರಕ್ಷಣೆ ಮಾಡಬೇಕಾದ ಪೊಲೀಸರು ಇವತ್ತು ಭಕ್ಷಕರಾಗಿದ್ದಾರೆ. ಪೊಲೀಸ್ ಅತ್ಯಾಚಾರ ನಾವು ಸಹಿಸುವುದಿಲ್ಲ. ನಿಷ್ಪಕ್ಷಪಾತವಾದ ತನಿಖೆ ನಡೆದು ಸತ್ಯ ಹೊರಬರಲಿ. ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ತಮ್ಮ ರಕ್ಷಣೆಗೋಸ್ಕರ ಪೊಲೀಸರು ಕಟ್ಟುಕಥೆ ಕಟ್ಟಿದ್ದಾರೆ. ಕೆಲವು ಪೇದೆಗಳ ಅಮಾನತ್ತಿನಿಂದ ನ್ಯಾಯ ದೊರಕುವುದಿಲ್ಲ. ಹಿರಿಯ ಅಧಿಕಾರಿಗಳು ಕೂಡ ಇದಕ್ಕೆ ಜವಾಬ್ದಾರರು. ಡಿ.ಜಿ-ಐ.ಜಿ.ಪಿ ಪ್ರವೀಣ್ ಸೂದ್ ಸಾಹೇಬರ ಜೊತೆ ಈಗಾಗಲೇ ಈ ವಿಷಯ ಚರ್ಚೆ ಮಾಡಿದ್ದೇನೆ
 
 
img
 

In the middle of the total failure in governance and administration, volunteers and organisations come forward to feed the hungry and serve the poor, 29/05/2021

ಸರ್ಕಾರ ಮತ್ತು ಆಡಳಿತದ ವೈಫಲ್ಯದ ಮಧ್ಯೆ ಇಸ್ಕಾನ್ ಫೌಂಡೇಶನ್, ಐ ಕೇರ್ ಬ್ರಿಗೇಡ್, ಜೈ ಕರ್ನಾಟಕ ಮತ್ತು ಇತರ ಸಂಘ ಸಂಸ್ಥೆಗಳು ಹಾಗೂ ಹಲವಾರು ಜನ ವೈಯಕ್ತಿಕ ಮಟ್ಟದಲ್ಲಿ ಜನರ ಸೇವೆಗೆ ಹಾಗೂ ಬಡ ಜನರ ಹಸಿವು ನೀಗಿಸಲು ಮುಂದಾಗಿದ್ದಾರೆ. ಕೊರೋನಾ ಮಹಾಮಾರಿಯನ್ನು ಎದುರಿಸಿ ತಮ್ಮ ಜೀವ ಹಾಗೂ ಆರೋಗ್ಯ ಎರಡನ್ನೂ ಪಣಕ್ಕೆ ಇಟ್ಟು ಇವರು ಜನರ ಸಹಾಯ ಮಾಡಲು ನಿಂತಿದ್ದಾರೆ. ಅವರಿಗೆ ಶುಭವಾಗಲಿ ಮತ್ತು ಕಾವೇರಿ ತಾಯಿ ಅವರನ್ನು ರಕ್ಷಿಸಲಿ. ಇವರ ಜನಪರ ಕಾಳಜಿ, ಶಿಸ್ತು ಮತ್ತು ಬದ್ಧತೆಗೆ ನಾನು ತಲೆಬಾಗುತ್ತೇನೆ. ನನಗೂ ಕೂಡ ಅವರೊಂದಿಗೆ ಸೇರಿ ಜನರ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಅವರಿಗೆ ಕೃತಜ್ಞತೆಗಳು.
 
 
img