Best playback singer of Kannada film industry, awarded with tens of awards, songing Smt. S. I am very sad to hear about Janaki's demise. I pray that the Almighty God give his family, relatives and huge fans the strength to bear the grief of his departure , 13/07/2026

ಕನ್ನಡ ಚಿತ್ರರಂಗದ ಶ್ರೇಷ್ಠ ಹಿನ್ನೆಲೆ ಗಾಯಕಿ, ಹತ್ತಾರು ಪ್ರಶಸ್ತಿಗಳ ಪುರಸ್ಕೃತೆ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ರವರ ನಿಧನದ ಸುದ್ದಿ ತಿಳಿದು ಅತೀವ ದುಃಖ ಉಂಟಾಗಿದೆ.
ಕನ್ನಡ ಮಾತ್ರವಲ್ಲದೆ ಅನೇಕ ಭಾಷೆಗಳಲ್ಲಿ ತಮ್ಮ ಅದ್ಭುತ ಕಂಠಸಿರಿಯನ್ನು ಮೆರೆದು, ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ, ಸರ್ವಶಕ್ತ ಭಗವಂತ ಅವರ ಕುಟುಂಬ ವರ್ಗದವರಿಗೆ, ಬಂಧು-ಮಿತ್ರರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
 

The occasion of the 2027 Kodava Hockey Festival hosting rights program, Pandanda Bopanna, the president of Kodava Hockey Academy, handed over grandfathers and handed over to our president Naren Karyappa. My wife Mrs. Kanchan Ponnanna, grandmother's family, 11/07/2026

2027 ನೇ ಸಾಲಿನ ಕೊಡವ ಹಾಕಿ ಉತ್ಸವದ ಆತಿಥ್ಯದ ಹಕ್ಕು ಹಸ್ತಾಂತರ ಕಾರ್ಯಕ್ರಮ ಶ್ರೀ ಪಾಡಿ ಇಗ್ಗುತಪ್ಪ ಸನ್ನಿಧಿಯಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡಂಡ ಬೋಪಣ್ಣ ರವರು ಅಜ್ಜಿಕುಟ್ಟಿರ ಹಾಕಿ ನಮ್ಮೆಯ ಅಧ್ಯಕ್ಷರಾದ ನರೇನ್ ಕಾರ್ಯಪ್ಪ ರವರಿಗೆ ಹಾಸ್ತಾಂತರಿಸಿದ ಸಂದರ್ಭ
ಈ ಸಂದರ್ಭದಲ್ಲಿ ನನ್ನೊಂದಿಗೆ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ, ಅಜ್ಜಿಕುಟ್ಟಿರ ಕುಟುಂಬಸ್ಥರು, ಹಾಗೂ ಹಾಕಿ ಉತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
 

Thanks to all my well wishers who wished me on my birthday., 11/07/2026

ನನ್ನ ಜನ್ಮದಿನದಂದು ಶುಭ ಕೋರಿದ ನನ್ನ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು.

 


A sweet journey of sweet bonding., 11/07/2026

ಸುಮಧುರ ಬಾಂಧವ್ಯದ ಸವಿದಾದ ಪಯಣ.

 


Promise implementation book, which is a record of development works for third year, was released. Dharma Guru, my wife Mrs. Kanchan Ponnanna, my brothers Shri Ajjikuttira Naren Karyappa, President of District Guarantee Implementation Committee, Titira Dha, 11/07/2026

ಮೂರನೇ ವರ್ಷದ ಅಭಿವೃದ್ಧಿ ಕಾಮಗಾರಿಗಳ ದಾಖಲೆಯಾದ ವಾಗ್ದಾನ ಅನುಷ್ಠಾನ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಈ ಸಮಾರಂಭದಲ್ಲಿ ಧರ್ಮ ಗುರುಗಳು, ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ, ನನ್ನ ಸಹೋದರರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.