Visited Kondangeri village and conducted Guddali pooja and inauguration program of various works and then participated in the Urs ceremony, 22/04/2025
ಕೊಂಡಂಗೇರಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಬಳಿಕ ಉರುಸ್ ಸಮಾರಂಭದಲ್ಲಿ ಭಾಗವಹಿಸಲಾಯಿತು.

The auspicious occasion of inauguration of the development work of Ammathi-Palibetta road, 22/04/2025
ಅಮ್ಮತ್ತಿ-ಪಾಲಿಬೆಟ್ಟ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶುಭ ಸಂದರ್ಭ.

Inaugurated and conveyed best wishes for the newly constructed road near Anwarul Uda School in Arji, Virajpet Taluk, built with the grant provided by the Honorable MLA, 21/04/2025
ವಿರಾಜಪೇಟೆ ತಾಲೂಕು ಅರ್ಜಿಯ ಅನ್ವಾರುಲ್ ಉದಾ ಶಾಲೆಯ ಸಮೀಪದಲ್ಲಿ ಮಾನ್ಯ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಉದ್ಘಾಟಿಸಿ ಶುಭ ಕೋರಿದೆ.

A groundbreaking ceremony was conducted and best wishes were offered for the construction of a new building and additional classrooms for the benefit of college students at Virajpet taluk, 21/04/2025
ವಿರಾಜಪೇಟೆ ತಾಲೂಕಿನ,ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಟ್ಟಡ ಹಾಗೂ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಕೊಠಡಿಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶುಭ ಕೋರಲಾಯಿತು.

Condolence Message on the Demise of Pope Francis – A Revered Spiritual Leader, 21/04/2025
ಕ್ಯಾಥೋಲಿಕ್ ಸಮುದಾಯದ ಪರಮೋಚ್ಚ ಧರ್ಮ ಗುರುಗಳಾದ *ಪೋಪ್ ಫ್ರಾನ್ಸಿಸ್* ರವರು ಅಸ್ತಂಗತರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.
ತಮ್ಮ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ಒಬ್ಬ ಉತ್ತಮ ಮಾರ್ಗದರ್ಶಕರಾಗಿದ್ದ ಇವರು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದರು. ಇವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು,ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಇವರ ಅಪಾರ ಭಕ್ತವೃಂದಕ್ಕೆ ಆ ಸರ್ವಶಕ್ತ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ತಮ್ಮ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ಒಬ್ಬ ಉತ್ತಮ ಮಾರ್ಗದರ್ಶಕರಾಗಿದ್ದ ಇವರು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದರು. ಇವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು,ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಇವರ ಅಪಾರ ಭಕ್ತವೃಂದಕ್ಕೆ ಆ ಸರ್ವಶಕ್ತ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
