Membership drive at Virajpet block, 01/03/2022

ಕೊಡಗಿನ ವಿರಾಜಪೇಟೆಯಲ್ಲಿ ನಮ್ಮ ಪಕ್ಷದ ತತ್ವ ಸಿದ್ದಾಂತಗಳನ್ನು ಅನುಸರಿಸುವ ಮತ್ತು ಪಕ್ಷಕ್ಕೆ ದುಡಿಯುವ ಹುಮ್ಮಸ್ಸು ಇರುವವರನ್ನು ಪಕ್ಷಕ್ಕೆ ಸೇರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನದ ಅವಶ್ಯಕತೆ ಬಗ್ಗೆ ಮಾತನಾಡಿದೆ. ಪಕ್ಷದ ಸಿದ್ಧಾಂತಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಸುವ ಬಗ್ಗೆ ಮತ್ತು ಪಕ್ಷದಲ್ಲಿ ಇರುವವರ ಹೊಣೆಗಾರಿಕೆಗಳ ಬಗ್ಗೆ ಮಾತನಾಡಿದೆ. ಪಕ್ಷದ ಬಗ್ಗೆ ನಿಷ್ಠೆ, ಸೈದ್ಧಾಂತಿಕ ಬದ್ಧತೆಯ ಮತ್ತು ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಟದ ಅವಶ್ಯಕತೆ ಬಗ್ಗೆ ವಿವರಿಸಿದೆ.
 
 
img
img
img
img