Praja Seva Programme Launched in Kodagu, 05/09/2026
ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಕಾರ್ಯಕ್ರಮಕ್ಕೆ ಇಂದು ಕೊಡಗು ಜಿಲ್ಲೆಯಲ್ಲಿ ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ನರೇಂದ್ರ ಸ್ವಾಮಿ ರವರೊಂದಿಗೆ ಚಾಲನೆ ನೀಡಲಾಯಿತು.
ಜನಸಾಮಾನ್ಯರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೇರವಾಗಿ ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಆಹ್ವಾನಗಳನ್ನು ಹೇಳಿ ಶೀಘ್ರದಲ್ಲೇ ಅವರಿಗೆ ಪರಿಹಾರ ಮಾಡಿ ಕೊಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ .
ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳು ಹಾಗೂ ಅಗತ್ಯ ನಾಗರಿಕ ಸೇವೆಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ನೇರವಾಗಿ, ಸುಲಭವಾಗಿ ತಲುಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ.
ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸರ್ಕಾರದ ಸೌಲಭ್ಯಗಳು ಪಾರದರ್ಶಕವಾಗಿ ಸಿಗಬೇಕು ಹಾಗೂ ಸಾರ್ವಜನಿಕರ ಕುಂದುಕೊರತೆಗಳು ಒಂದೇ ವೇದಿಕೆಯಲ್ಲಿ ಪರಿಹಾರವಾಗಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ಹಂಚಿಕೊಳ್ಳಲಾಯಿತು.
ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅವರ ಏಳಿಗೆಗೆ ಶ್ರಮಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ.
ಈ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
