We are always ready to respond to the problems of our party workers and common people, 09/02/2022

ಕೊಡಗಿನಲ್ಲಿ ಜನಪ್ರತಿನಿಧಿಗಳಿಗೆ ಆಮಿಷವೊಡ್ಡಿ ಬಿಜೆಪಿಗೆ ಸೆಳೆದುಕೊಳ್ಳುವ ಕೆಲಸ ಆ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಕಳೆದ ಫೆಬ್ರವರಿ 4ನೇ ತಾರೀಕು ಚೆಂಬು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾ ಕಟ್ಟೆಪಾರೆ ರವರು ಆ ಅಮೀಷಗಳನ್ನು ತಿರಸ್ಕರಿಸಿ ಮಾತೃಪಕ್ಷ ಕಾಂಗ್ರೆಸ್'ಗೆ ಮರಳಿದ್ದಾರೆ.ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಯಾವುದೇ ರೀತಿಯ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಈ ಘಟನೆ ಬಿಜೆಪಿಯವರ ಕುತಂತ್ರವನ್ನು ಮತ್ತೊಮ್ಮೆ ಜಗಜ್ಜಾಹೀರಾಗಿಸಿದೆ. ನಮ್ಮ ಪಕ್ಷದ ಕಾರ್ಯಕರ್ತರ ಹಾಗೂ ಜನಸಾಮಾನ್ಯರ ತೊಂದರೆಗಳಿಗೆ ಸ್ಪಂದಿಸಲು ನಾವುಗಳು ಸದಾ ಸಿದ್ಧರಿರುತ್ತೇವೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಇಸ್ಮಾಯಿಲ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ಗೌಡ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ಹೊಸೂರು, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ಸೂರಜ್ ಹೊಸೂರು, ಚಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕುಸುಮಾ ಯೋಗೀಶ್ವರ್, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷರಾದ ಶ್ರೀಧರನ್ ನಾಯರ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹನೀಫ್ ಸಂಪಾಜೆ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮುತ್ತು ರಶೀದ್, ಸಾಮಾಜಿಕ ಜಾಲತಾಣ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಶೇಖರ್, ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ ದೋಳ್ಪಾಡಿ, ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಹೊಸೂರು, ಚೆಂಬು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾರತಿ, ಯುವ ಕಾಂಗ್ರೆಸ್ ವಲಯಾಧ್ಯಕ್ಷ ಭರತ್ ಕೆದಂಬಾಡಿ, ಯುವ ಮುಖಂಡರಾದ ಮನು ಏಣಿಯರ, ಮಧು ಹೊಸೂರು, ಲೋಕೇಶ್ ಹೊದ್ದೆಟ್ಟಿ, ಚನಿಯಪ್ಪ ಕುದುರೆ ಪಾಯ, ಕೆಸಿ ಸುರೇಶ್ ಹಾಗೂ ಇತರರ  ಸಮ್ಮುಖದಲ್ಲಿ ಶ್ರೀಮತಿ ಶಶಿಕಲಾ ಕಟ್ಟೆಪಾರೆ ಅವರು ಮರಳಿ ಕಾಂಗ್ರೆಸ್ ಸೇರ್ಪಡೆಯಾದರು.