Honoured by Kodava Samaja Bengaluru, 12/02/2022

ಬಂದೂಕು ಪರವಾನಗಿ ವಿನಾಯಿತಿ ಪ್ರಕರಣದಲ್ಲಿ, ಉಚ್ಚ ನ್ಯಾಯಾಲಯದ ಮುಂದೆ ನಾನು ಮಂಡಿಸಿದ ವಾದ ಹಾಗೂ ಪ್ರಕರಣದಲ್ಲಿ ನಾನು ವಹಿಸಿದ ಪಾತ್ರವನ್ನು ಗುರುತಿಸಿ, ಕೊಡವ ಸಮಾಜ ಬೆಂಗಳೂರು ಅವರು, ಕೊಡವರ ಹೆಮ್ಮೆಯ ಪ್ರತೀಕವಾದ ಒಡಿ ಕತ್ತಿಯನ್ನು ನನಗೆ ಕಾಣಿಕೆಯ ರೂಪದಲ್ಲಿ ನೀಡಿ ಸನ್ಮಾನಿಸಿದ್ದಾರೆ. ನನ್ನ ಎಲ್ಲಾ ಪೂರ್ವಜರಿಗೆ, ಹಿರಿಯರಿಗೆ, ಕೊಡವ ಸಮಾಜ ಬೆಂಗಳೂರಿನ ಅಧ್ಯಕ್ಷರಿಗೆ, ಕಾರ್ಯದರ್ಶಿಗಳಿಗೆ, ಎಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕಾರಿ ಸಮಿತಿಯ ಸದಸ್ಯರಿಗೆ, ಮತ್ತು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದೇ ಸಂದರ್ಭದಲ್ಲಿ, ಈ ಪ್ರಕರಣದಲ್ಲಿ ವಕಾಲತ್ತು ನಡೆಸಿದ ಎಲ್ಲಾ ವಕೀಲರನ್ನು ಸಮಾಜ ಗೌರವಿಸಿದೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು. ತಾಯಿ ಕಾವೇರಿಯ ಆಶೀರ್ವಾದ ಮತ್ತು ರಕ್ಷಣೆ ಎಲ್ಲರ ಮೇಲಿರಲಿ ಎಂದು ಬೇಡಿಕೊಳ್ಳುತ್ತೇನೆ.
 
 
img