The fight will go on until justice is served, 14/06/2021

ರಾಯ್ ಡೇವಿಸ್ ಎಂಬ ಅಮಾಯಕನನ್ನು ಕೊಲೆ ಮಾಡಲಾಗಿದೆ. ಇದು ಪೊಲೀಸರು ನಡೆಸಿರುವ ಹತ್ಯೆ. ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಪೊಲೀಸರಿಂದ ಅತ್ಯಾಚಾರ ಹೆಚ್ಚಾಗಿದೆ. ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಮತ್ತು ಶಾಸಕರ ಗಮನಕ್ಕೆ ತಂದಿದ್ದೇನೆ. ಜನಜೀವನವನ್ನು ರಕ್ಷಣೆ ಮಾಡಬೇಕಾದ ಪೊಲೀಸರು ಇವತ್ತು ಭಕ್ಷಕರಾಗಿದ್ದಾರೆ. ಪೊಲೀಸ್ ಅತ್ಯಾಚಾರ ನಾವು ಸಹಿಸುವುದಿಲ್ಲ. ನಿಷ್ಪಕ್ಷಪಾತವಾದ ತನಿಖೆ ನಡೆದು ಸತ್ಯ ಹೊರಬರಲಿ. ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ತಮ್ಮ ರಕ್ಷಣೆಗೋಸ್ಕರ ಪೊಲೀಸರು ಕಟ್ಟುಕಥೆ ಕಟ್ಟಿದ್ದಾರೆ. ಕೆಲವು ಪೇದೆಗಳ ಅಮಾನತ್ತಿನಿಂದ ನ್ಯಾಯ ದೊರಕುವುದಿಲ್ಲ. ಹಿರಿಯ ಅಧಿಕಾರಿಗಳು ಕೂಡ ಇದಕ್ಕೆ ಜವಾಬ್ದಾರರು. ಡಿ.ಜಿ-ಐ.ಜಿ.ಪಿ ಪ್ರವೀಣ್ ಸೂದ್ ಸಾಹೇಬರ ಜೊತೆ ಈಗಾಗಲೇ ಈ ವಿಷಯ ಚರ್ಚೆ ಮಾಡಿದ್ದೇನೆ
 
 
img