Met the Honorable Revenue Minister of Karnataka State Government Shri Krishna Biregowda and requested to bring amendment to some bills of the Revenue Department, 14/07/2025
ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಲಾಯಿತು.ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ ಕಂದಾಯ ಕಾಯ್ದೆ 1964 ಕ್ಕೆ ತರಬೇಕೆಂದು ಮಾನ್ಯ ಕಂದಾಯ ಸಚಿವರಲ್ಲಿ ಮನವಿ ಮಾಡಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು
