Constitution Awareness Programme, 19/02/2022

ಪದ್ಮನಾಭನಗರ ಕ್ಷೇತ್ರದ ಮುಖಂಡರಾದ ರಂಗನಾಥ್ ನಾಯ್ಡು ಅವರು ಪಕ್ಷದ ಹೊಸ ಕಚೇರಿಯಲ್ಲಿ ಸಂವಿಧಾನ ಅರಿವು ಅಭಿಯಾನ ಕಾರ್ಯಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಘಟಕದ ವತಿಯಿಂದ ಹಮ್ಮಿಕೊಂಡಿದ್ದರು. ಆ ಕಾರ್ಯಕ್ರಮದಲ್ಲಿ ನಮ್ಮ ಪಕ್ಷದ ಕಾನೂನು ಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್'ನ ಅಧ್ಯಕ್ಷರು ಭಾಗವಹಿಸಿದ್ದರು. ಭಾರತೀಯ ಸಂವಿಧಾನಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ, ಮತ್ತು ಈಗಿನ ಪರಿಸ್ಥಿತಿಯಲ್ಲಿ ದೇಶದಲ್ಲಿ ಸಂವಿಧಾನ ಬದಲಾವಣೆ ಮತ್ತು ಸಂವಿಧಾನ ತಿದ್ದುಪಡಿ ಬಗ್ಗೆ ಒಂದು ಕುತಂತ್ರ ನಡೆಯುತ್ತಿರುವ ಬಗ್ಗೆ ಚರ್ಚಿಸಲಾಯಿತು. ಸಂವಿಧಾನದ ರಕ್ಷಣೆ ಮತ್ತು ಅದರ ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯ. ಈ ದೇಶಕ್ಕೆ ಒಂದೇ ಧರ್ಮ ಗ್ರಂಥ ಎನ್ನುವುದು ನಮ್ಮ ಸಂವಿಧಾನವೇ.
 
 
img
img
img