Visit to homes of accident victims of Pollibetta, 24/04/2022

ಕಲ್ಲಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಪಾಲಿಬೆಟ್ಟದ ಏಳು ಜನ ನಿವಾಸಿಗಳ ಮನೆಗಳಿಗೆ ಶನಿವಾರ ಭೇಟಿ ಕೊಟ್ಟು ಅವರ ಕುಟುಂಬಸ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಲಾಯಿತು.  

ದುರಂತದಲ್ಲಿ ಸಾವನ್ನಪ್ಪಿದವರ ಬಡ ಕುಟುಂಬಗಳಿಗೆ ಸರಕಾರ ವಿಶೇಷ ಪ್ರಕರಣದಡಿ ಸೂಕ್ತ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ.

ಈ ಭೇಟಿಯ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಡಿಸಿಸಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ ಎ.ಎಸ್.ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಎ. ಎಸ್. ಟಾಟು ಮೊಣ್ಣಪ್ಪ, ಡಿಸಿಸಿ ಸದಸ್ಯರಾದ ಮುಕ್ಕಾಟಿರ ಸಂದೀಪ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಎನ್. ಪ್ರತ್ಯು, ಕೆ.ಎಂ. ಬಾಲಕೃಷ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಚ್. ವಿ. ರಾಮದಾಸ್, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಮಾಳೇಟಿರ ಸಾಬ ಕಾಳಪ್ಪ, ವಿಜೇಶ್, ಪಕ್ಷದ ಮಾಲ್ದಾರೆ ವಲಯ ಸಮಿತಿ ಅಧ್ಯಕ್ಷರಾದ ಸಜಿ ಥೋಮಸ್ ಮೊದಲಾದವರು ಉಪಸ್ಥಿತರಿದ್ದರು.

#Kodagu #Coorg #Pollibetta #Madikeri #Ponnampet #Virajpet #Kushalnagar