Support to the demand for ST reservation , 28/03/2022

ಫೆ.10 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಏಕಾಂಗಿಯಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಸ್ಥಳದಲ್ಲೇ ಭೇಟಿ ಮಾಡಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.

ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ಸಮಿತಿಯು ಶಿಫಾರಸ್ಸು ಮಾಡಿರುವಂತೆ ST ಮೀಸಲಾತಿಯನ್ನು ಶೇಕಡಾ 3ರ ರಿಂದ ಶೇಕಡಾ 7.5ಕ್ಕೆ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಕಳೆದ ಎರಡು ವರ್ಷದಿಂದ ಕಾಲ ದೂಡುತ್ತಾ ಬಂದಿದೆ. ತಮ್ಮ ಸಾಂವಿಧಾನಿಕ ಹಕ್ಕನ್ನು ಬೇಡುತ್ತಿರುವ ST ಸಮುದಾಯಕ್ಕೆ ಇದರಿಂದ ವಂಚನೆ ಮಾಡಿದಂತಾಗಿದೆ.

ಸಮುದಾಯದ ಜನಸಂಖ್ಯೆಯ ಅನುಪಾತಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಂವಿಧಾನಬದ್ದವಾದ ಮೀಸಲಾತಿ ಕೇಳುತ್ತಿರುವುದರಲ್ಲಿ ಸಾಮಾಜಿಕ ನ್ಯಾಯದ ಉದ್ದೇಶ ಇದೆ. ಹೆಚ್ಚಿನ ಕಾಲ ಹರಣ ಮಾಡದೆ ನ್ಯಾ.ನಾಗಮೋಹನ ದಾಸ್ ವರದಿಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ಆಗ್ರಹ ಮಾಡಲಾಯಿತು. ವಾಲ್ಮೀಕಿ ಸಮಾಜದ ಇನ್ನಿತರ ಬೇಡಿಕೆಗಳಿಗೂ ಕಾನೂನಿನ ಅಡಿಯಲ್ಲಿ ನಮ್ಮ ಬೆಂಬಲ ಇರುವುದಾಗಿ ಪೂಜ್ಯ ಸ್ವಾಮೀಜಿಯವರಿಗೆ ತಿಳಿಸಲಾಯಿತು.

#Reservation #ST #NagamohanaDas #Kodagu #Virajpet #Madikeri #Ponnampet